
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಚಿತ್ರ
ಚೆನ್ನೈ: ‘ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಶನಿವಾರ ವಾಯಭಾರ ಕುಸಿತವಾಗಿದ್ದು, ಅ.27ಕ್ಕೆ ಇದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ’ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಚಂಡಮಾರುತಕ್ಕೆ ‘ಮೊಂಟಾ’ ಎಂದು ಹೆಸರಿಡಬಹುದು ಎನ್ನಲಾಗಿದೆ.
‘ಈ ಚಂಡಮಾರುತದ ಕಾರಣ ಅ.25ರಿಂದ ಅ.29ರ ಒಳಗೆ ತಮಿಳುನಾಡಿನ ಕೆಲವು ಭಾಗಗಳಲ್ಲಿ, ಆಂಧ್ರ ಪ್ರದೇಶದ ಕರಾವಳಿ ಭಾಗ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ. ಈಶಾನ್ಯ ಮಳೆ ಮಾರುತಗಳು ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದೆ’ ಎಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.