ADVERTISEMENT

ಕೊಚ್ಚಿ: ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 12 ಮೀನುಗಾರರ ರಕ್ಷಣೆ

ಪಿಟಿಐ
Published 17 ಮೇ 2021, 6:25 IST
Last Updated 17 ಮೇ 2021, 6:25 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ (ಪಿಟಿಐ): ಕೊಚ್ಚಿ ಕರಾವಳಿಯಲ್ಲಿ 35 ನಾಟಿಕಲ್‌ ಮೈಲುಗಳ ದೂರದಲ್ಲಿ ಸಿಲುಕಿದ್ದ 12 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿರುವುದಾಗಿ ಭಾರತೀಯ ಕರಾವಳಿ ಕಾವಲು ಪಡೆ (ಐಸಿಜಿ) ಹೇಳಿದೆ.

ಭಾನುವಾರ ರಾತ್ರಿ ಮೀನುಗಾರಿಕೆಯ ದೋಣಿ ‘ಜೀಸಸ್‌’ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಐಸಿಜಿಯ ಹಡಗು ದೋಣಿಯನ್ನು ಮತ್ತು ಅದರಲ್ಲಿದ್ದವರನ್ನು ರಕ್ಷಿಸಿದೆ. ಎಲ್ಲರೂ ಸುರಕ್ಷಿತವಾಗಿದ್ದು ಆರೋಗ್ಯದಿಂದ ಇದ್ದಾರೆ ಎಂದು ಐಸಿಜಿಯ ಟ್ವಿಟರ್‌ನಲ್ಲಿ ಹೇಳಲಾಗಿದೆ.

ತೌತೆ ಚಂಡಮಾರುತವು ತೀವ್ರ ಸ್ವರೂಪ ಪಡೆಯುವ ಬಗ್ಗೆ ಹವಾಮಾನ ಇಲಾಖೆ ಈ ಮೊದಲು ನಿರೀಕ್ಷಿಸಿರಲಿಲ್ಲ ಎನ್ನಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.