ADVERTISEMENT

ಕಣ್ಣೀರು ಹಾಕಿದ ಡಿ.ಕೆ. ಸುರೇಶ್

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2019, 18:51 IST
Last Updated 4 ಸೆಪ್ಟೆಂಬರ್ 2019, 18:51 IST

ನವದೆಹಲಿ: ಡಿ.ಕೆ. ಶಿವಕುಮಾರ್‌ ಅವರನ್ನು ಇ.ಡಿ ವಶಕ್ಕೆ ನೀಡಲು ಕೋರ್ಟ್ ಅನುಮತಿ ನೀಡಿದ ಬಳಿಕ ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ ಅವರು ಕಣ್ಣೀರು ಹಾಕಿದರು.

ವಕೀಲರು, ಪತ್ರಕರ್ತರಿಂದ ತುಂಬಿದ್ದ ಕೋರ್ಟ್ ಹಾಲ್‌ನಲ್ಲಿ ಆದೇಶ ಪ್ರಕಟವಾಗುತ್ತಿದ್ದಂತೆಯೇ ಅವರು ಚಿಂತಾಕ್ರಾಂತರಾದರು. ಕೋರ್ಟ್ ಆವರಣದಲ್ಲಿ ಸಹೋದರ ಶಿವಕುಮಾರ್ ಜತೆ ಮಾತನಾಡುತ್ತಾ ಕಣ್ಣೀರಿಕ್ಕಿದರು. ಇವರ ಜೊತೆಗಿದ್ದ ಶಾಸಕರಾದ ಡಾ. ರಂಗನಾಥ್, ಲಕ್ಷ್ಮೀ ಹೆಬ್ಬಾಳಕರ ಅವರೂ ಭಾವುಕರಾದರು.

ಕೆಲವು ದಿನಗಳಿಂದ ಡಿಕೆಶಿ ಜೊತೆಗಿರುವ ಸುರೇಶ್, ಮಂಗಳವಾರ ಹಾಗೂ ಬುಧವಾರ ಇಡೀ ದಿನ ಆರ್‌ಎಂಎಲ್ ಆಸ್ಪತ್ರೆಯಲ್ಲಿದ್ದುಕೊಂಡು ಸಹೋದರನ ಯೋಗಕ್ಷೇಮ ನೋಡಿಕೊಂಡಿದ್ದಾರೆ. ಮಾಜಿ ಸಂಸದರಾದ ಧ್ರುವನಾರಾಯಣ್, ಚಂದ್ರಪ್ಪ ಮತ್ತು ಎಲ್.ಆರ್. ಶಿವರಾಮೇಗೌಡ ಅವರೂ ಜತೆಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.