ADVERTISEMENT

ದಾಭೋಲ್ಕರ್‌ ಹತ್ಯೆ ಪ್ರಕರಣ: ಪಿಸ್ತೂಲ್ ವಶ

ಪಿಟಿಐ
Published 21 ಆಗಸ್ಟ್ 2018, 18:50 IST
Last Updated 21 ಆಗಸ್ಟ್ 2018, 18:50 IST

ನವದೆಹಲಿ: ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಮಂಗಳವಾರ ನಾಡ ಪಿಸ್ತೂಲ್ ಅನ್ನು ಸಿಬಿಐ ವಶಪಡಿಸಿಕೊಂಡಿದ್ದು, ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆಗೆ ಬಳಸಿದ ಪಿಸ್ತೂಲಿಗೂ, ಇದಕ್ಕೂ ಸಾಮ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ಈಚೆಗೆ ಬಂಧಿಸಿರುವ ಸಚಿನ್ ಪ್ರಕಾಶ್ ರಾವ್‌ ಅಂದುರೆ ನೀಡಿದ ಮಾಹಿತಿ ಮೇರೆಗೆ ಖುಕ್ರಿ ಹೆಸರಿನ, ಮೂರು ಸುತ್ತು ಗುಂಡು ಹಾರಿಸುವ 7.65 ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನು ಅಂದುರೆಯ ಸಂಬಂಧಿಯ ಸ್ನೇಹಿತರ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ. ಇದೇ ಪಿಸ್ತೂನಿಂದ ದಾಭೋಲ್ಕರ್‌ ಹತ್ಯೆ ಮಾಡಲಾಗಿದೆಯೇ ಎಂಬುದರ ಪತ್ತೆಗೆ ತನಿಖಾ ಸಂಸ್ಥೆಯ ಪರಿಶೀಲನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಆಗಸ್ಟ್‌ 18ರಂದು ಅಂದುರೆಯನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.