ADVERTISEMENT

ಆಂಧ್ರ ಪ್ರದೇಶ: ವ್ಯಾನ್‌ ಪಲ್ಟಿಯಾಗಿ ಏಳು ಮಂದಿ ಸಾವು, ಹಲವರಿಗೆ ಗಾಯ

ಏಜೆನ್ಸೀಸ್
Published 30 ಅಕ್ಟೋಬರ್ 2020, 9:21 IST
Last Updated 30 ಅಕ್ಟೋಬರ್ 2020, 9:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಮರಾವತಿ: ಪೂರ್ವ ಗೋದಾವರಿ ಜಿಲ್ಲೆಯ ತಂತಿಕೊಂಡಾ ಗ್ರಾಮದಲ್ಲಿ ಗುರುವಾರ ತಡರಾತ್ರಿ ವ್ಯಾನ್‌ ಪಲ್ಟಿಯಾಗಿ ಏಳು ಮಂದಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಾನ್‌ನಲ್ಲಿ 15 ಮಂದಿ ಮದುವೆ ಮುಗಿಸಿಕೊಂಡು ವಾಪಸ್‌ ಊರಿಗೆ ಹಿಂದಿರುಗುತ್ತಿದ್ದರು ಎಂದು ತಿಳಿದು ಬಂದಿದೆ.

ಅಪಘಾತದ ಬಗ್ಗೆ ರಾಜ್ಯಪಾಲ ವಿಶ್ವಭೂಷಣ್‌ ಹರಿಚಂದ್ರನ್‌ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.