ನವದೆಹಲಿ: ರೈತರ ಸಾಲ ಹೆಚ್ಚಾಗಿದೆ. ಆದರೆ ಆದಾಯದಲ್ಲಿ ಹೆಚ್ಚಳವಾಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
2018ರ ವರೆಗಿನ ಐದು ವರ್ಷಗಳಲ್ಲಿ ರೈತ ಕುಟುಂಬಗಳ ಸಾಲವು ಸರಾಸರಿ ಶೇಕಡಾ 57ರಷ್ಟು ಹೆಚ್ಚಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಟ್ಟೀಟ್ ಮಾಡಿದ್ದಾರೆ.
'ರೈತರ ಆದಾಯ ಹೆಚ್ಚಾಗಲಿಲ್ಲ. ಆದರೆ ಸಾಲ ಹೆಚ್ಚಾಗಿದೆ. ದೇಶವನ್ನು ಪೋಷಿಸುವರು ತನ್ನ ಕುಟುಂಬಕ್ಕೆ ಆಹಾರವನ್ನು ತುಂಬಲು ಸಾಧ್ಯವಾಗದಿದ್ದಾಗ ಏನು ಮಾಡುವುದು?' ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಈ ಮೊದಲು ನಿರುದ್ಯೋಗದ ಬಗ್ಗೆ ಉಲ್ಲೇಖ ಮಾಡಿರುವ ರಾಹುಲ್ ಗಾಂಧಿ, ದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಕೇಂದ್ರ ಸರ್ಕಾರವು 'ಆತ್ಮನಿರ್ಭರ್' ಕರಾಳ ನಗರವನ್ನಾಗಿ ಮಾಡಿದೆ ಎಂದು ವ್ಯಂಗ್ಯವಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.