ನವದೆಹಲಿ: ಬಿಜೆಪಿ ಸಂಸದ ರಮೇಶ್ ಬಿಧೂರಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬುಧವಾರ ಖುಲಾಸೆಗೊಳಿಸಿದೆ.
2017ರ ಜುಲೈನಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮನ್ನು ಅಪರಾಧಿ ಎಂದು ಕರೆಯುವ ಮೂಲಕ ಕೇಜ್ರಿವಾಲ್ ಮಾನನಷ್ಟ ಹೇಳಿಕೆ ನೀಡಿದ್ದಾರೆ ಎಂದು ಬಿಧೂರಿ ಆರೋಪಿಸಿದ್ದರು.
ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಬಿಧೂರಿ ಐಪಿಸಿ ಸೆಕ್ಷನ್ 500 ಅಡಿಯಲ್ಲಿ ದೂರು ದಾಖಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.