ADVERTISEMENT

ಮಾನನಷ್ಟ ಮೊಕದ್ದಮೆ: ಶಶಿ ತರೂರ್‌ಗೆ ದೆಹಲಿ ಕೋರ್ಟ್‌ ದಂಡ

ಪಿಟಿಐ
Published 15 ಫೆಬ್ರುವರಿ 2020, 21:09 IST
Last Updated 15 ಫೆಬ್ರುವರಿ 2020, 21:09 IST
ಶಶಿ ತರೂರ್‌
ಶಶಿ ತರೂರ್‌   

ನವದೆಹಲಿ: ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹಾಜರಾಗದ ಕಾಂಗ್ರೆಸ್‌ ಮುಖಂಡ, ಸಂಸದ ಶಶಿ ತರೂರ್‌ ಅವರಿಗೆ ದೆಹಲಿ ನ್ಯಾಯಾಲಯ ₹5 ಸಾವಿರ ದಂಡ ವಿಧಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಪ್ರಧಾನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿಶಾಲ್‌ ಅವರು, ‘ಹಿಂದೆ ಹಲವು ಬಾರಿ ನಿರ್ದೇಶನ ನೀಡಿದ್ದರೂ, ನ್ಯಾಯಾಲಯದ ಮುಂದೆ ಹಾಜರಾಗಲು ತರೂರ್‌ ವಿಫಲರಾಗಿದ್ದಾರೆ’ ಎಂದಿದ್ದಾರೆ.

‘ಶಶಿ ತರೂರ್‌ ಅವರು ಮೋದಿಯವರನ್ನು ಶಿವಲಿಂಗದ ಮೇಲಿನ ಚೇಳಿಗೆ ಹೋಲಿಸಿದ್ದರು. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ’ ಎಂದು ಆರೋಪಿಸಿ, ದೆಹಲಿ ಬಿಜೆಪಿ ನಾಯಕ ರಾಜೀವ್‌ ಬಬ್ಬರ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.