ನವದೆಹಲಿ: ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹಾಜರಾಗದ ಕಾಂಗ್ರೆಸ್ ಮುಖಂಡ, ಸಂಸದ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ₹5 ಸಾವಿರ ದಂಡ ವಿಧಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಪ್ರಧಾನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶಾಲ್ ಅವರು, ‘ಹಿಂದೆ ಹಲವು ಬಾರಿ ನಿರ್ದೇಶನ ನೀಡಿದ್ದರೂ, ನ್ಯಾಯಾಲಯದ ಮುಂದೆ ಹಾಜರಾಗಲು ತರೂರ್ ವಿಫಲರಾಗಿದ್ದಾರೆ’ ಎಂದಿದ್ದಾರೆ.
‘ಶಶಿ ತರೂರ್ ಅವರು ಮೋದಿಯವರನ್ನು ಶಿವಲಿಂಗದ ಮೇಲಿನ ಚೇಳಿಗೆ ಹೋಲಿಸಿದ್ದರು. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ’ ಎಂದು ಆರೋಪಿಸಿ, ದೆಹಲಿ ಬಿಜೆಪಿ ನಾಯಕ ರಾಜೀವ್ ಬಬ್ಬರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.