ನವದೆಹಲಿ: ಕೊರೊನಾ ವೈರಸ್ಗೆ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿದ್ದು, ಈ ಸಮಾಜದ ಎಲ್ಲರಿಗೂ ಮುಕ್ತವಾಗಿ ಮತ್ತು ಕಡಿಮೆ ಬೆಲೆಗೆ ಲಸಿಕೆ ದೊರೆಯುವಂತೆ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಈ ಕುರಿತು ಲಸಿಕೆ ತಯಾರಿಕೆಯ ಜತೆಗೆ, ಮನುಷ್ಯರ ಮೇಲೆ ಪ್ರಯೋಗ ನಡೆಸುವಂತಹ ಪ್ರಕ್ರಿಯೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ‘ಸಮಾಜದ ಎಲ್ಲ ವರ್ಗದವರಿಗೂ, ಕೈಗೆಟುವ ಬೆಲೆಯಲ್ಲಿ ಲಸಿಕೆ ಲಭ್ಯತೆ ಮತ್ತು ಪ್ರಾಮಾಣಿಕವಾಗಿ ಲಸಿಕೆ ತಲುಪಿಸಲು ಯಾವ ಕ್ರಮ ಕೈಗೊಂಡಿದೆ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಕೇಳಿದ್ದಾರೆ.
‘ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ಸಮಾಜದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಕೈಗೆಟುಕುವಂತೆ ಆಗಬೇಕು ಎನ್ನುವುದು ನನ್ನ ಆಶಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ, ಆ ಕ್ರಮಗಳನ್ನು ಅನುಸರಿಸುತ್ತಿದೆಯೇ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.