ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ವಾಯುಗುಣಮಟ್ಟ ಕಳಪೆಯಾಗಿದ್ದು, ಇದು ಮುಂದಿನ 24 ಗಂಟೆಗಳಲ್ಲಿ ಸುಧಾರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಕಳೆದ ವರ್ಷ ನವೆಂಬರ್ ತಿಂಗಳಿಗೆ ಹೋಲಿಸಿದರೆಗುರುವಾರ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀರಾ ಕಳಪೆಯಾ ಗಿತ್ತು. ಇದಕ್ಕೆ ಕೃಷಿ ತ್ಯಾಜ್ಯ ಸುಡುವಿಕೆಯಿಂದ ಉಂಟಾಗುವ ಮಾಲಿನ್ಯವೂ ಕಾರಣವಾಗಿದೆ. ಈ ವರ್ಷ ಗಾಳಿಯ ಗುಣಮಟ್ಟ ಕುಸಿಯಲು ಕೃಷಿ ತ್ಯಾಜ್ಯ ಸುಡುವಿಕೆಯ ಶೇ 42ರಷ್ಟು ಮಾಲಿನ್ಯವೂ ಸೇರಿಕೊಂಡಿದೆ.
ಪ್ರತಿಕೂಲವಾದ ಹವಾಮಾನ - ಶಾಂತ ಗಾಳಿ ಮತ್ತು ಕಡಿಮೆ ತಾಪಮಾನ - ಮತ್ತು ನೆರೆಯ ರಾಜ್ಯಗಳಲ್ಲಿನ ಕೃಷಿ ತ್ಯಾಜ್ಯ ಸುಡುವಿಕೆಯಿಂದ ಉಂಟಾಗುವ ಹೊಗೆಯು ಗಾಳಿಯ ಗುಣಮಟ್ಟ ಕುಸಿಯುವಂತೆ ಮಾಡಿದೆ. ಈ ವರ್ಷ ಜನವರಿ ನಂತರ ಮೊದಲ ಬಾರಿಗೆ ದೆಹಲಿಯಲ್ಲಿ ವಾಯು ಗುಣಮಟ್ಟದ ಸೂಚ್ಯಂಕ ಇಷ್ಟು ಕುಸಿತ ಕಂಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.