ADVERTISEMENT

Delhi blast case: ಎನ್‌ಐಎಗೆ ವರ್ಗಾಯಿಸಿದ ಕೇಂದ್ರದ ಗೃಹ ಸಚಿವಾಲಯ

ಪಿಟಿಐ
Published 11 ನವೆಂಬರ್ 2025, 10:39 IST
Last Updated 11 ನವೆಂಬರ್ 2025, 10:39 IST
<div class="paragraphs"><p>ಎನ್‌ಐಎ </p></div>

ಎನ್‌ಐಎ

   

ನವದೆಹಲಿ: ದೇಶದ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಸಮೀಪದ ಮೆಟ್ರೊ ನಿಲ್ದಾಣ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರದ ಗೃಹ ವ್ಯವಹಾರಗಳ ಸಚಿವಾಲಯವು(ಎಂಎಚ್‌ಎ) ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್‌ಐಎ) ವರ್ಗಾಯಿಸಿದೆ ಎಂದು ಮೂಲಗಳು ತಿಳಿಸಿವೆ.

ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, ಇದೊಂದು ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಿರುವ ಕೇಂದ್ರ ಸರ್ಕಾರ, ಎನ್‌ಐಎಗೆ ಪ್ರಕರಣ ವರ್ಗಾಯಿಸಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಸ್ಫೋಟದ ಬೆನ್ನಲ್ಲೇ ಕೇಂದ್ರದ ಗೃಹ ಸಚಿವ ಅಮಿತ್ ಶಾ ರಾಜಧಾನಿ ದೆಹಲಿ ಮತ್ತು ದೇಶದ ವಿವಿಧೆಡೆ ಭದ್ರತಾ ಪರಿಶೀಲನೆ ನಡೆಸಿದ ಕೆಲ ಗಂಟೆಗಳ ಬಳಿಕ ಈ ಆದೇಶ ಬಂದಿದೆ.

ಇದೇವೇಳೆ, ಮಂಗಳವಾರ ಮಧ್ಯಾಹ್ನ ಅಮಿತ್ ಶಾ ಮತ್ತೊಂದು ಭದ್ರತಾ ಸಭೆ ನಡೆಸಿದ್ದಾರೆ.

ಸ್ಫೋಟ ಕುರಿತಂತೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿದ್ದು, ಆಳಕ್ಕೆ ಇಳಿದು ಪರಿಶೀಲನೆ ನಡೆಸಲಿವೆ ಎಂದು ಶಾ ಹೇಳಿದ್ದಾರೆ.

ಸೋಮವಾರ ಸಂಜೆ ಕೇಂಪುಕೋಟೆ ಮೆಟ್ರೊ ನಿಲ್ದಾಣ ಬಳಿಯ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರು ಸ್ಫೋಟಗೊಂಡಿದೆ, ಘಟನೆಯಲ್ಲಿ 12 ಮಂದಿ ಮೃತಪಟ್ಟರೆ, ಹಲವರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.