ADVERTISEMENT

ದೆಹಲಿ ಸ್ಫೋಟ: ಪ್ರಮುಖ ಸಂಚುಕೋರನ ಬಂಧಿಸಿದ ಎನ್‌ಐಎ

ಪಿಟಿಐ
Published 17 ನವೆಂಬರ್ 2025, 3:02 IST
Last Updated 17 ನವೆಂಬರ್ 2025, 3:02 IST
<div class="paragraphs"><p>ದೆಹಲಿ ಸ್ಫೋಟ ನಡೆದ ಸ್ಥಳ</p></div>

ದೆಹಲಿ ಸ್ಫೋಟ ನಡೆದ ಸ್ಥಳ

   

ಪಿಟಿಐ ಚಿತ್ರ

ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟಕ್ಕೆ ಸಂಬಂಧಿಸಿ ಪ್ರಮುಖ ಸಂಚುಕೋರನನ್ನು ಎನ್‌ಐಎ ಅಧಿಕಾರಿಗಳು ಶ್ರೀನಗರದಲ್ಲಿ ಭಾನುವಾರ ಬಂಧಿಸಿದ್ದಾರೆ. ಇದರೊಂದಿಗೆ, ಈ ಘಟನೆ ಕುರಿತ ತನಿಖೆಯು ಮಹತ್ವದ ಘಟ್ಟ ತಲುಪಿದಂತಾಗಿದೆ. 

ADVERTISEMENT

ಅಮೀರ್‌ ರಶೀದ್‌ ಅಲಿ ಬಂಧಿತ. ಸ್ಫೋಟಗೊಂಡ ಕಾರು ಅಮೀರ್‌ ಹೆಸರಿನಲ್ಲಿ ನೋಂದಣಿಯಾಗಿತ್ತು. ಈತ ಜಮ್ಮು–ಕಾಶ್ಮೀರದ ಪಾಂಪೋರ್‌ನ ಸಂಬೂರಾ ನಿವಾಸಿ’ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

‘ಈ ಭಯೋತ್ಪಾದಕ ಕೃತ್ಯ ಎಸಗಲು ಅಮೀರ್‌, ಆತ್ಮಾಹುತಿ ಬಾಂಬರ್‌ ಡಾ.ಉಮರ್‌ ನಬಿ ಜೊತೆ ಸೇರಿ ಸಂಚು ರೂಪಿಸಿದ್ದ. ‘ಕಾರಿನಲ್ಲಿ ಒಯ್ದ ಕಚ್ಚಾ ಬಾಂಬ್’ ಬಳಸಿ ಸ್ಫೋಟಿಸುವ ಉದ್ದೇಶದಿಂದ ಕಾರು ಖರೀದಿಗೆ ನೆರವಾಗಲು ಈತ ಕಳೆದ ವರ್ಷ ದೆಹಲಿಗೆ ಬಂದಿದ್ದ’ ಎಂದಿದ್ದಾರೆ.

‘ಡಾ.ಉಮರ್‌ ನಬಿ,ಅಮೀರ್‌ ಅಲಿ ಕಳೆದ ಕೆಲ ತಿಂಗಳಿನಿಂದ ಸಂಪರ್ಕದಲ್ಲಿದ್ದರು. ನ.10ರಂದು ನಡೆಸಿದ ದಾಳಿಗಾಗಿ ಸ್ಫೋಟಕ ಸಿದ್ಧಪಡಿಸುವಲ್ಲಿ ನಿರತರಾಗಿದ್ದರು’ ಎನ್‌ಐಎ ಶಂಕಿಸಿದೆ.

ಇದೇ ಮೊದಲ ಬಾರಿಗೆ ಎನ್‌ಐಎ, ಡಾ.ಉಮರ್ ನಬಿಯನ್ನು ‘ಆತ್ಮಾಹುತಿ ಬಾಂಬರ್‌’ ಎಂದು ಕರೆದಿದೆ. ಸ್ಫೋಟಕಕ್ಕೆ ‘ಕಾರಿನಲ್ಲಿ ಒಯ್ದ ಕಚ್ಚಾ ಬಾಂಬ್‌’(ಐಇಡಿ) ಎಂಬ ಪದವನ್ನು ಸಹ ಮೊದಲ ಬಾರಿಗೆ ಬಳಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.