ADVERTISEMENT

ದೆಹಲಿ ಹಿಂಸಾಚಾರ| ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಕೈಗೊಳ್ಳಿ: ಎಎಪಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 11:15 IST
Last Updated 27 ಫೆಬ್ರುವರಿ 2020, 11:15 IST
ಎಎಪಿ ನಾಯಕ ಗೋಪಾಲ ರೈ
ಎಎಪಿ ನಾಯಕ ಗೋಪಾಲ ರೈ   

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದಿರುವ ಹಿಂಸಾಚಾರಕ್ಕೆ ಸಂಬಂಧಿಸಿದವರು ಯಾರೇ ಇದ್ದರೂ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಎಪಿ ನಾಯಕರಾರ ಸಂಜಯ್‌ ಸಿಂಗ್‌ ಮತ್ತು ಗೋಪಾಲ ರೈ ಗುರುವಾರ ಹೇಳಿದ್ದಾರೆ.

ಇಂಟೆಲಿಜೆನ್ಸ್ ಬ್ಯೂರೋ ನೌಕರ ಅಂಕಿತ್‌ ಶರ್ಮಾ ಹತ್ಯೆಗೆ ಎಎಪಿ ಕೌನ್ಸಿಲರ್ ತಹೀರ್‌ ಹುಸೇನ್ ಕಾರಣವೆಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಎಎಪಿ ತನ್ನ ನಿಲುವು ಸ್ಪಷ್ಟಪಡಿಸಿದೆ.

26 ವರ್ಷದ ಅಂಕಿತ್ ಶರ್ಮಾ ಅವರ ಹತ್ಯೆಯ ಹಿಂದೆ ಹುಸೇನ್ ಮತ್ತು ಅವರ ಸಹಚರರ ಕೈವಾಡ ಇದೆ ಎಂದು ಅಂಕಿತ್ ಕುಟುಂಬ ಸದಸ್ಯರು ಆರೋಪಿಸಿದ್ದರು. ಈ ಆರೋಪವನ್ನು ಹುಸೇನ್ ತಳ್ಳಿಹಾಕಿದ್ದರು.

ADVERTISEMENT

‘ಧರ್ಮ, ಜಾತಿಗಳನ್ನು ಲೆಕ್ಕಿಸದೇ ಪ್ರಾಮಾಣಿಕವಾಗಿ ವಿಚಾರಣೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅದು ಎಎಪಿಯ ತಹೀರ್‌ ಹುಸೇನ್‌ ಆಗಿರಬಹುದು, ಬಿಜೆಪಿಯ ಕಪಿಲ್‌ ಮಿಶ್ರಾ ಆಗಿರಬಹುದು‘ ಎಂದು ಎಎಪಿ ನಾಯಕ ಗೋಪಾಲ ರೈ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.