ದೆಹಲಿ: ಗಂಟಲು ನೋವು ಮತ್ತು ಜ್ವರ ಕಾಣಿಸಿಕೊಂಡ ಕಾರಣ ದೆಹಲಿ ಮುಖ್ಯಮಂತ್ರಿ ಅರವಿಂದಕೇಜ್ರಿವಾಲ್ ಸೆಲ್ಫ್ ಕ್ವಾರಂಟೈನ್ನಲ್ಲಿರಲು ನಿರ್ಧರಿಸಿದ್ದು,ಮಂಗಳವಾರ ಅವರು ಕೋವಿಡ್-19 ಪರೀಕ್ಷೆಗೊಳಪಡಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೇಜ್ರಿವಾಲ್ ಅವರಿಗೆ ಡಯಾಬಿಟೀಸ್ ಕೂಡಾ ಇದೆ. ಭಾನುವಾರ ಮಧ್ಯಾಹ್ನದಿಂದ ಅವರಿಗೆ ಗಂಟಲು ನೋವು ಮತ್ತು ಸಣ್ಣ ಜ್ವರ ಇತ್ತು.ಮಂಗಳವಾರ ಬೆಳಗ್ಗೆ ಕೋವಿಡ್-19 ಪರೀಕ್ಷೆ ನಡೆಸುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ಕೇಜ್ರಿವಾಲ್ ಕಚೇರಿಯ ಮೂಲಗಳು ಹೇಳಿವೆ.
ಭಾನುವಾರ ಬೆಳಗ್ಗೆ ಅವರು ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದು ಅದರ ನಂತರ ಯಾವುದೇ ಸಭೆಯಲ್ಲಿ ಭಾಗಿಯಾಗಿಲ್ಲ, ಕಳೆದ ಎರಡು ತಿಂಗಳಿನಿಂದ ಕೇಜ್ರಿವಾಲ್ ವಿಡಿಯೊ ಸಂವಾದದ ಮೂಲಕ ಮಾತ್ರ ಸಭೆ ನಡೆಸುತ್ತಿದ್ದಾರೆ.
ಅರವಿಂದಕೇಜ್ರಿವಾಲ್ ಗುಣಮುಖರಾಗಲಿ ಎಂದು ಹಾರೈಸಿದ ಟ್ವೀಟಿಗರು
ಕೇಜ್ರಿವಾಲ್ ಬೇಗನೆ ಗುಣಮುಖರಾಗಲಿ ಎಂದು ಟ್ವೀಟಿಗರು ಹಾರೈಸುತ್ತಿದ್ದು #TakeCareAK ಹ್ಯಾಷ್ಟ್ಯಾಗ್ ಟ್ರೆಂಡ್ ಆಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.