ADVERTISEMENT

ಅತ್ಯಾಚಾರ ಸಂತ್ರಸ್ತೆಯನ್ನು ಉಳಿಸಲು ವೈದ್ಯರ ಪ್ರಯತ್ನ ಮುಂದುವರಿದಿದೆ: ಕೇಜ್ರಿವಾಲ್

ಏಜೆನ್ಸೀಸ್
Published 7 ಆಗಸ್ಟ್ 2020, 13:58 IST
Last Updated 7 ಆಗಸ್ಟ್ 2020, 13:58 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌   

ನವದೆಹಲಿ: ಅತ್ಯಾಚಾರ ಸಂತ್ರಸ್ತ 12 ವರ್ಷದ ಬಾಲಕಿಯನ್ನು ಉಳಿಸಲು ವೈದ್ಯರು ತಮ್ಮಿಂದ ಸಾಧ್ಯವಾದ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಹೇಳಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ಮಾಡಿದ್ದ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯ ಪಶ್ಚಿಮ್‌ ವಿಹಾರ್ ಪ್ರದೇಶದಲ್ಲಿ ನಡೆದಿತ್ತು.

ಬಾಲಕಿಗೆ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಗಾಗಿ ಪ್ರಾರ್ಥನೆ ಮಾಡುವಂತೆ ಜನರಲ್ಲಿ ಮನವಿ ಕೇಜ್ರಿವಾಲ್ ಮಾಡಿದ್ದಾರೆ.

ADVERTISEMENT

‘ವೈದ್ಯರು ಹಾಗೂ ಬಾಲಕಿಯ ಪೊಷಕರೊಂದಿಗೆ ಫೋನ್‌ ಮೂಲಕ ಮಾತನಾಡಿದ್ದಾನೆ. ಗುರುವಾರ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಆಕೆ ಬದುಕುಳಿಯಲು ಹೋರಾಟ ನಡೆಸುತ್ತಿದ್ದಾಳೆ. ವೈದ್ಯರು ತಮ್ಮಿಂದ ಸಾಧ್ಯವಾದ ಪ್ರಯತ್ನ ಮಾಡುತ್ತಿದ್ದಾರೆ. ದಯವಿಟ್ಟು ಆಕೆಗಾಗಿ ಪ್ರಾರ್ಥಿಸಿ. ಈ ಮಧ್ಯೆ ದೆಹಲಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

‘ಬಾಲಕಿಯ ದೇಹದ ಮೇಲೆ ಗಾಯಗಳಾಗಿದ್ದು, ಖಾಸಗಿ ಭಾಗಗಳಿಂದ ರಕ್ತಸ್ರಾವವಾಗುತ್ತಿತ್ತು. ಇಡೀ ದೇಹವು ರಕ್ತದಿಂದ ತೊಯ್ದಿತ್ತು. ಆಕೆಯನ್ನು ಮೊದಲು ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ನಂತರ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.