ADVERTISEMENT

ದೀಪಾವಳಿ-2020: ದೆಹಲಿಯ ಅಕ್ಷರಧಾಮ ದೇವಾಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕೇಜ್ರಿವಾಲ್‌

ಏಜೆನ್ಸೀಸ್
Published 14 ನವೆಂಬರ್ 2020, 15:39 IST
Last Updated 14 ನವೆಂಬರ್ 2020, 15:39 IST
ದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಪೂಜೆಯಲ್ಲಿ ತೊಡಗಿರುವ ಕೇಜ್ರಿವಾಲ್‌ ಕುಟಂಬ
ದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಪೂಜೆಯಲ್ಲಿ ತೊಡಗಿರುವ ಕೇಜ್ರಿವಾಲ್‌ ಕುಟಂಬ   

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೀಪಾವಳಿ ಪ್ರಯುಕ್ತ ಶನಿವಾರ ಸಂಜೆ ದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಕೇಜ್ರಿವಾಲ್‌ ಕುಟುಂಬ ಸದಸ್ಯರು, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಅವರ ಸಂಪುಟದ ಇತರ ಸದಸ್ಯರು ಪೂಜೆಯಲ್ಲಿ ಭಾಗವಹಿಸಿದ್ದರು

ದೀಪಾವಳಿ ಪ್ರಯುಕ್ತ ಅಕ್ಷರಧಾಮ ದೇವಸ್ಥಾನದ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ADVERTISEMENT

ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ದೀಪಾವಳಿ ಪೂಜೆಯಲ್ಲಿ ಭಾಗವಹಿಸುವುದಾಗಿ ಕೇಜ್ರಿವಾಲ್‌ ಗುರುವಾರ ಘೋಷಿಸಿದ್ದರು. ಹಬ್ಬದ ದಿನಗಳಂದು ಪಟಾಕಿ ಸಿಡಿಸಬಾರದು ಎಂದು ಅವರು ದೆಹಲಿ ಜನರಿಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.