ನವದೆಹಲಿ: ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇತರೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. ಹೆಚ್ಚುವರಿಯಾಗಿರುವ ಆಮ್ಲಜನಕ ಸಂಗ್ರಹವನ್ನು ಕಳುಹಿಸುವಂತೆ ಶನಿವಾರ ಮನವಿ ಮಾಡಿದ್ದಾರೆ.
ಗಂಭೀರ ಸ್ಥಿತಿಯಲ್ಲಿರುವ ಕೋವಿಡ್–19 ರೋಗಿಗಳ ಚಿಕಿತ್ಸೆ ಆಮ್ಲಜನಕ ಕೊರತೆಯಿಂದ ಸಾಧ್ಯವಾಗುತ್ತಿಲ್ಲ, ದೆಹಲಿಯಲ್ಲಿ ಉಸಿರಾಟದ ಸಮಸ್ಯೆಯಿಂದ ನೂರಾರು ಮಂದಿ ಸಾವಿಗೀಡಾಗಿದ್ದಾರೆ.
'ಹೆಚ್ಚುವರಿ ಆಮ್ಲಜನಕ ಸಂಗ್ರಹವಿದ್ದರೆ ದೆಹಲಿಗೆ ಪೂರೈಕೆ ಮಾಡುವಂತೆ ಎಲ್ಲ ಮುಖ್ಯಮಂತ್ರಿಗಳಿಗೆ ಪತ್ರ ಮುಖೇನ ಮನವಿ ಮಾಡುತ್ತಿದ್ದೇನೆ. ಕೇಂದ್ರ ಸರ್ಕಾರವು ಸಹಕಾರ ನೀಡುತ್ತಿದ್ದರೂ, ಕೊರೊನಾ ತೀವ್ರತೆಯು ಲಭ್ಯವಿರುವ ಎಲ್ಲ ಸಂಪನ್ಮೂಲಗಳನ್ನು ಸಾಲದಾಗಿಸಿದೆ' ಎಂದು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.