ಚಿತ್ರ ಕೃಪೆ: ಪಿಟಿಐ
ನವದೆಹಲಿ: ಜನರ ಅಹವಾಲುಗಳನ್ನು ಸ್ವೀಕರಿಸುವ ಸಂದರ್ಭದಲ್ಲಿ ವ್ಯಕ್ತಿಯಿಂದ ಹಲ್ಲೆಗೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ಇದೀಗ ಮತ್ತೆ ‘ಜನ್ ಸುನ್ವಾಯಿ’ ಕಾರ್ಯಕ್ರಮವನ್ನು ಸಾರ್ವಜನಿಕ ಸ್ಥಳದಲ್ಲೇ ಆರಂಭಿಸಿದ್ದಾರೆ. ಆದರೆ ಈ ಬಾರಿ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.
ಆಗಸ್ಟ್ 20 ರಂದು ರಾಜ್ ನಿವಾಸ್ ಮಾರ್ಗದಲ್ಲಿರುವ ಜನ್ ಸೇವಾ ಸದನ್ನಲ್ಲಿ 'ಜನ್ ಸುನ್ವಾಯಿ ಕಾರ್ಯಕ್ರಮದ ವೇಳೆ ಗುಜರಾತ್ ಮೂಲದ ವ್ಯಕ್ತಿಯೊಬ್ಬ ಗುಪ್ತಾ ಅವರ ಮೇಲೆ ಹಲ್ಲೆ ನಡೆಸಿದ್ದ.
ಹಾಗಾಗಿ ಈ ಬಾರಿ ಬಿಗಿ ಭದ್ರತೆಯಲ್ಲಿ ಜನ್ ಸುನ್ವಾಯಿ' ಕಾರ್ಯಕ್ರಮವನ್ನು ಮತ್ತೆ ಆರಂಭಿಸಿ, ಭದ್ರತಾ ಲೋಪ ಆಗದಂತೆ ಎಚ್ಚರಿಕೆ ವಹಿಸಲಾಗಿತ್ತು.
ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ಲೋಹ ಶೋಧಕಗಳಿಂದ ತಪಾಸಣೆ ಏರ್ಪಡಿಸಲಾಗಿತ್ತು. ಈ ಬಾರಿ ರೇಖಾ ಗುಪ್ತಾ ಅವರಿಗೆ ಹೆಚ್ಚು ಮಹಿಳಾ ಭದ್ರತಾ ಸಿಬ್ಬಂದಿಗಳನ್ನು ನೀಡಲಾಗಿತ್ತು ಎಂದು ಸಲಹೆಗಾರರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಜನಸಮಾನ್ಯರ ಸಮಸ್ಯೆಗಳನ್ನು ಆಲಿಸಿ, ಕುಂದುಕೊರತೆಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆಂದು ಸಲಹೆಗಾರರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.