ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್ನ ನಿರ್ಗಮಿತ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ಭೂಷಣ್ ಸಿಂಗ್ ಅವರಿಗೆ ಶುಕ್ರವಾರದ ಮಟ್ಟಿಗೆ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವುದರಿಂದ ದೆಹಲಿ ಕೋರ್ಟ್ ವಿನಾಯಿತಿ ನೀಡಿತು.
ಈ ಸಂಬಂಧ, ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರಿಗೆ ಬ್ರಿಜ್ಭೂಷಣ್ ಸಿಂಗ್ ಪರ ವಕೀಲ ಅರ್ಜಿ ಸಲ್ಲಿಸಿದರು. ‘ಸಂಸತ್ ಸದಸ್ಯರಾಗಿ ತಮ್ಮ ಜವಾಬ್ದಾರಿ ನಿರ್ವಹಣೆಯಲ್ಲಿ ನಿರತರಾಗಿರುವ ಕಾರಣ ಖುದ್ದು ಹಾಜರಾತಿಯಿಂದ ಬ್ರಿಜ್ಭೂಷಣ್ ಸಿಂಗ್ ಅವರಿಗೆ ವಿನಾಯಿತಿ ನೀಡಬೇಕು’ ಎಂದು ಕೋರಿದರು.
‘ಈ ದಿನದ ಮಟ್ಟಿಗೆ ವಿನಾಯಿತಿ ನೀಡಲಾಗಿದೆ’ ಎಂದು ಹೇಳಿದ ನ್ಯಾಯಾಧೀಶ ಜಸ್ಪಾಲ್, ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದರು.
ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಫೆಡರೇಷನ್ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಕೋರ್ಟ್ಗೆ ಹಾಜರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.