ADVERTISEMENT

ರಶೀದ್‌ ಎಂಜಿನಿಯರ್‌ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್‌

ಪಿಟಿಐ
Published 28 ಆಗಸ್ಟ್ 2024, 13:57 IST
Last Updated 28 ಆಗಸ್ಟ್ 2024, 13:57 IST
<div class="paragraphs"><p>ರಶೀದ್‌ ಎಂಜಿನಿಯರ್‌</p></div>

ರಶೀದ್‌ ಎಂಜಿನಿಯರ್‌

   

ನವದೆಹಲಿ: ಭಯೋತ್ಪಾದಕ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದ್ದ ಆರೋಪದಡಿ ಬಂಧಿತರಾಗಿರುವ ಸಂಸದ ರಶೀದ್‌ ಎಂಜಿನಿಯರ್ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ದೆಹಲಿಯ ಕೋರ್ಟ್‌ ಬುಧವಾರ ಕಾಯ್ದಿರಿಸಿತು.

ರಶೀದ್ ಎಂಜಿನಿಯರ್ ಎಂದೇ ಗುರುತಿಸುವ ಶೇಖ್‌ ಅಬ್ದುಲ್ ರಶೀದ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಇಲ್ಲಿನ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶರಾದ ಚಂದರ್‌ ಜಿತ್ ಸಿಂಗ್ ಅವರು ನಡೆಸಿದ್ದು, ಆದೇಶ ಕಾಯ್ದಿರಿಸಿದರು. 

ADVERTISEMENT

ಅರ್ಜಿ ವಿಚಾರಣೆಗೆ ಪರಿಗಣಿಸಿದ್ದ ಕೋರ್ಟ್‌, ಪ್ರತಿಕ್ರಿಯೆ ದಾಖಲಿಸಲು ಆಗಸ್ಟ್‌ 20ರಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಆದೇಶಿಸಿತ್ತು. ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದ್ದ ಆರೋಪದಡಿ ಎನ್‌ಐಎ ಎಂಜಿನಿಯರನ್ನು ಬಂಧಿಸಿದ್ದು, 2019ರಿಂದ ಜೈಲಿನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.