ADVERTISEMENT

ಅಬಕಾರಿ ನೀತಿ ಪ್ರಕರಣ: ಮತ್ತೊಬ್ಬರ ಬಂಧನ

ಪಿಟಿಐ
Published 15 ಏಪ್ರಿಲ್ 2024, 13:56 IST
Last Updated 15 ಏಪ್ರಿಲ್ 2024, 13:56 IST
.
.   

ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಗೋವಾ ವಿಧಾನಸಭೆ ಚುನಾವಣೆ ವೇಳೆ ಎಎಪಿಗೆ ನಿಧಿಯನ್ನು ನಿರ್ವಹಿಸುತ್ತಿದ್ದ ಚನ್‌ಪ್ರೀತ್‌ ಸಿಂಗ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿವೆ.

ಈ ಮೂಲಕ ಪ್ರಕರಣದಲ್ಲಿ ಇದುವರೆಗೆ ಬಂಧಿಸಿದವರ ಸಂಖ್ಯೆ 17ಕ್ಕೆ ಏರಿದೆ. ಚನ್‌ಪ್ರೀತ್ ಸಿಂಗ್‌ ಅವರನ್ನು ಈ ಹಿಂದೆ ಇದೇ ಪ್ರಕರಣದಲ್ಲಿ ಸಿಬಿಐ ಸಹ ಬಂಧಿಸಿತ್ತು.

ADVERTISEMENT

‘2022ರ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪರ ಪ್ರಚಾರ, ಸಮೀಕ್ಷೆ, ವಲಯ ನಿರ್ವಹಣೆ ಮಾಡುತ್ತಿದ್ದವರಿಗೆ ಚನ್‌ಪ್ರೀತ್‌ ಸಿಂಗ್‌ ಹಣ ನೀಡುವ ಜವಾಬ್ದಾರಿ ಹೊತ್ತಿದ್ದರು’ ಎಂದು ಇ.ಡಿ ಕೋರ್ಟ್‌ಗೆ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.