ADVERTISEMENT

ಭ್ರಷ್ಟಾಚಾರ ಪ‍್ರಕರಣ: ಡಿ.11ರಂದು ಹಾಜರಾಗಲು ಕವಿತಾಗೆ ಸಿಬಿಐ ನೋಟಿಸ್‌

ಪಿಟಿಐ
Published 6 ಡಿಸೆಂಬರ್ 2022, 14:11 IST
Last Updated 6 ಡಿಸೆಂಬರ್ 2022, 14:11 IST
.
.   

ನವದೆಹಲಿ: ದೆಹಲಿ ಅಬಕಾರಿ ನೀತಿ ಪ‍್ರಕರಣಕ್ಕೆ ಸಂಬಂಧಿಸಿ ಡಿಸೆಂಬರ್‌ 11ರಂದು ಹೈದರಾಬಾದ್‌ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಆರ್‌ಎಸ್‌ನ ವಿಧಾನ ಪರಿಷತ್‌ ಸದಸ್ಯೆ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ಅವರ ಪುತ್ರಿ ಕೆ. ಕವಿತಾ ಅವರಿಗೆ ಸಿಬಿಐ ನೋಟಿಸ್‌ ನೀಡಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ವಿಚಾರಣೆಗೆ ಹಾಜರಾಗುವ ದಿನಾಂಕವನ್ನು ಮುಂದೂಡಬೇಕೆಂದು ಕವಿತಾ ಅವರು ಕೋರಿದ್ದರು, ಈ ಕಾರಣಕ್ಕೆ ವಿಚಾರಣಾ ದಿನಾಂಕವನ್ನು ಡಿ.11ಕ್ಕೆ ನಿಗದಿ ಪಡಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಡಿಸೆಂಬರ್‌ 2 ರಂದು ಸಿಬಿಐ ನೀಡಿದ್ದ ಮೊದಲ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ಕವಿತಾ ಅವರು,‘ಎಫ್‌ಐಆರ್‌ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯನ್ನು ಪರಿಶೀಲಿಸಿದ್ದೇನೆ. ಎಲ್ಲಿಯೂ ನನ್ನ ಹೆಸರನ್ನು ಉಲ್ಲೇಖಿಸಿಲ್ಲ’ ಎಂದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.