ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ನಾಳೆ ಕವಿತಾ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2022, 19:31 IST
Last Updated 10 ಡಿಸೆಂಬರ್ 2022, 19:31 IST
ಕೆ.ಕವಿತಾ
ಕೆ.ಕವಿತಾ   

ಹೈದರಾಬಾದ್: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಬಿಆರ್‌ಎಸ್‌ನ ವಿಧಾನ ಪರಿಷತ್‌ನ ಸದಸ್ಯೆ ಕೆ.ಕವಿತಾ ಅವರನ್ನು ಸಿಬಿಐ ಡಿಸೆಂಬರ್‌ 11 ರಂದು ವಿಚಾರಣೆ ನಡೆಸಲಿದೆ.

ಸಿಬಿಐ ವಿಚಾರಣೆಗೂ ಒಂದು ದಿನ ಮುಂಚಿತವಾಗಿಕವಿತಾ ಅವರ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಕವಿತಾ ಅವರ ನಿವಾಸದ ಬಳಿ ಕೆಲವು ಭಿತ್ತಿಪತ್ರ ಹಾಗೂ ಫೋಟೊ ಪ್ರದರ್ಶಿಸಿ ಘೋಷಣೆಗಳನ್ನು ಹಾಕಿದರು.

‘ಹೋರಾಟಗಾರರ ಮಗಳು ಎಂದೂ ಭಯ ಪಡುವುದಿಲ್ಲ‘’ನಿಮ್ಮ ಜೊತೆ ನಾವಿದ್ದೇವೆ ಕವಿತಕ್ಕ‘ ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ್ದಾರೆ.ಕವಿತಾ ಅವರ ನಿವಾಸ ಬಂಜಾರ ಹಿಲ್ಸ್‌ನಲ್ಲಿ ವಿಚಾರಣೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.