ADVERTISEMENT

ದೆಹಲಿ ಅಬಕಾರಿ ಹಗರಣ: ಐವರು ಆರೋಪಿಗಳ ಜಾಮೀನು ಅರ್ಜಿ ವಜಾ

ಪಿಟಿಐ
Published 16 ಫೆಬ್ರುವರಿ 2023, 10:24 IST
Last Updated 16 ಫೆಬ್ರುವರಿ 2023, 10:24 IST
   

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನಗರ ನ್ಯಾಯಾಲಯ, ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಈ ಕುರಿತು ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್‌ಪಾಲ್ ಆದೇಶ ಹೊರಡಿಸಿದರು.

ಆರೋಪಿಗಳಾದ ಶರತ್ ರೆಡ್ಡಿ, ಅಭಿಷೇಕ್ ಬೋಯಿನ್‌ಪಲ್ಲಿ, ವಿಜಯ್ ನಾಯರ್, ಬಿನೋಯಿ ಬಾಬು ಮತ್ತು ಸಮೀರ್ ಮಹೇಂದ್ರು ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಲಾಗಿದೆ.

ADVERTISEMENT

ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಈಗಾಗಲೇ ಎಫ್‌ಐಆರ್ ದಾಖಲಿಸಿದೆ.

ಸಿಬಿಐ ಮತ್ತು ಇ.ಡಿ ಎಫ್‌ಐಆರ್‌ಗಳಲ್ಲಿ ದೆಹಲಿಯ ಉಪಮುಖ್ಯಮುಂತ್ರಿ ಮನೀಶ್ ಸಿಸೋಡಿಯಾ ಮತ್ತು ಅಬಕಾರಿ ಇಲಾಖೆಯ ಇತರೆ ಅಧಿಕಾರಿಗಳು ಆರೋಪಿಗಳೆಂದು ಹೆಸರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.