ADVERTISEMENT

ನವದೆಹಲಿ: ಶಸ್ತ್ರಸಜ್ಜಿತ ದುಷ್ಕರ್ಮಿಗಳಿಂದ ಯುವಕನಿಗೆ 9 ಸಲ ಇರಿತ

ಐಎಎನ್ಎಸ್
Published 22 ಜನವರಿ 2023, 9:19 IST
Last Updated 22 ಜನವರಿ 2023, 9:19 IST
   

ನವದೆಹಲಿ: ಆತಂಕಕಾರಿ ಘಟನೆಯೊಂದರಲ್ಲಿ ಅರ್ಧ ಡಜನ್ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಹಗಲಿನ ವೇಳೆಯೇ ಯುವಕನ ಮೇಲೆ ಅಮಾನುಷವಾಗಿ ದಾಳಿ ಮಾಡಿ, ಅಟ್ಟಾಡಿಸಿಕೊಂಡು ಇರಿದು, ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಪೂರ್ವ ದೆಹಲಿಯ ಮಯೂರ್ ವಿಹಾರ್‌ನಲ್ಲಿ ಭಾನುವಾರ ನಡೆದಿದೆ.

ಇಡೀ ಘಟನೆ ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ ಎಂದು ಐಎಎನ್‌ಎಸ್‌ ವರದಿ ಮಾಡಿದೆ.

ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಇರಿದು, ರಕ್ತದ ಮಡುವಿನಲ್ಲಿ ಬಿಟ್ಟು ಹೋಗಿದ್ದಾರೆ. ಒಂಬತ್ತು ಬಾರಿ ಇರಿದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಸಂತ್ರಸ್ತ ಯುವಕನನ್ನು ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ತಂಡ ರಚಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.