ADVERTISEMENT

ಪತ್ರಕರ್ತೆ ಸ್ವಾತಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ತಡೆ

ಪಿಟಿಐ
Published 7 ಮಾರ್ಚ್ 2023, 10:56 IST
Last Updated 7 ಮಾರ್ಚ್ 2023, 10:56 IST
ಸ್ವಾತಿ ಚತುರ್ವೇದಿ
ಸ್ವಾತಿ ಚತುರ್ವೇದಿ   

ನವದೆಹಲಿ (ಪಿಟಿಐ): ಪತ್ರಕರ್ತೆ ಸ್ವಾತಿ ಚತುರ್ವೇದಿ ವಿರುದ್ಧ ದೆಹಲಿ ಬಿಜೆಪಿ ವಕ್ತಾರ ತಜಿಂದರ್‌ ಪಾಲ್‌ ಸಿಂಗ್‌ ಬಗ್ಗಾ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ವಿಚಾರಣಾ ನ್ಯಾಯಾಲಯವು ವಿಚಾರಣೆ ನಡೆಸದಂತೆ ದೆಹಲಿ ಹೈಕೋರ್ಟ್‌ ಮಂಗಳವಾರ ತಡೆ ನೀಡಿದೆ.

ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಸಮನ್ಸ್‌ ನೀಡಿರುವುದನ್ನು ಪ್ರಶ್ನಿಸಿ ಚತುರ್ವೇದಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಎರಡು ವಾರದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಬಗ್ಗಾ ಅವರಿಗೆ ನ್ಯಾಯಾಧೀಶರಾದ ರಜ್ನೀಶ್‌ ಭಟ್ನಾಗರ್‌ ಅವರು ನೋಟಿಸ್‌ ಜಾರಿ ಮಾಡಿದ್ದಾರೆ.

ಅಲ್ಲಿಯವರೆಗೂ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.