ADVERTISEMENT

ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆಗೆ ಆಸ್ಪದ ನೀಡಬಾರದು: ದೆಹಲಿ ಹೈಕೋರ್ಟ್‌

ಕಠಿಣ ಕ್ರಮ, ಮಾರುಕಟ್ಟೆ ಸಂಘಗಳಿಗೆ ಅರಿವು ಮೂಡಿಸಲು ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸೂಚನೆ

ಪಿಟಿಐ
Published 18 ಜೂನ್ 2021, 7:52 IST
Last Updated 18 ಜೂನ್ 2021, 7:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿಯ ವಿವಿಧ ಮಾರುಕಟ್ಟೆಗಳಲ್ಲಿ ‘ಕೋವಿಡ್‌ 19‘ ಮಾರ್ಗಸೂಚಿ ಉಲ್ಲಂಘನೆ ಯಾಗುತ್ತಿರುವ ಕುರಿತು ಉಲ್ಲೇಖಿಸಿರುವ ದೆಹಲಿ ಹೈಕೋರ್ಟ್‌, ‘ಕೋವಿಡ್‌–19‘ ಮೂರನೇ ಅಲೆಯನ್ನು ಉತ್ತೇಜಿಸಲು ಕಾರಣವಾಗುವಂತಹ ಇಂಥ ನಿಯಮ ಉಲ್ಲಂಘನೆ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಹೇಳಿದೆ.

ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ಕೋವಿಡ್‌ – 19 ಮಾರ್ಗಸೂಚಿ ಪಾಲಿಸದಿರುವಂತಹ ದೃಶ್ಯಗಳಿರುವ ಛಾಯಾಚಿತ್ರಗಳನ್ನು ಏಮ್ಸ್‌ನ ವೈದ್ಯರೊಬ್ಬರು ಹೈಕೋರ್ಟ್‌ನ ನ್ಯಾಯಮೂರ್ತಿಯೊಬ್ಬರಿಗೆ ಕಳುಹಿಸಿದ್ದರು. ಆ ಫೋಟೊಗಳನ್ನು ಆಧರಿಸಿ ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಆಶಾ ಮೆನನ್ ಅವರನ್ನೊಳಗೊಂಡ ರಜಾಕಾಲದ ಪೀಠ ಈ ರೀತಿ ಸೂಚನೆ ನೀಡಿದೆ.

ಇದೇ ವೇಳೆ, ನ್ಯಾಯಾಲಯ ಮಾರುಕಟ್ಟೆ ಸ್ಥಳಗಳಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ, ಅಂಗಡಿ ಮಾಲೀಕರಿಗೆ ಅರಿವು ಮೂಡಿಸುವ ಸಂಬಂಧ ಮಾರಾಟಗಾರ ಸಂಘಗಳು ಮತ್ತು ಅಂಗಡಿಗಳ ಮಾಲೀಕರ ಒಕ್ಕೂಟದಾರರೊಂದಿಗೆ ಸಭೆ ನಡೆಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.