ADVERTISEMENT

ಫೇಸ್‌ಬುಕ್‌ ಇಂಡಿಯಾ ಉಪಾಧ್ಯಕ್ಷ ಅಜಿತ್‌ ಮೋಹನ್‌ಗೆ ಸಮನ್ಸ್‌

ಏಜೆನ್ಸೀಸ್
Published 12 ಸೆಪ್ಟೆಂಬರ್ 2020, 6:26 IST
Last Updated 12 ಸೆಪ್ಟೆಂಬರ್ 2020, 6:26 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   


ನವದೆಹಲಿ: ದೆಹಲಿ ವಿಧಾನಸಭೆಯ 'ಶಾಂತಿ ಮತ್ತು ಸಾಮರಸ್ಯ' ಸಮಿತಿಯು ಫೇಸ್‌ಬುಕ್ ಇಂಡಿಯಾದ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಿತ್ ಮೋಹನ್ ಅವರಿಗೆ ಸಮನ್ಸ್‌ ನೀಡಿದೆ.

'ದ್ವೇಷ ಭಾಷಣ ಕುರಿತ ನಿಯಮಗಳನ್ನು ಅನ್ವಯಿಸಲು ಫೇಸ್‌ಬುಕ್ ಉದ್ದೇಶಪೂರ್ವಕವಾಗಿ ನಿಷ್ಕ್ರಿಯವಾಗಿದೆ. ದೆಹಲಿಯಲ್ಲಿ ಶಾಂತಿ ಮತ್ತು ಸಾಮರಸ್ಯ ಹದಗೆಡುವುದಕ್ಕೆ ಇಂತಹ ಭಾಷಣಗಳು ಕಾರಣವಾಗಿವೆ' ಎಂದು ಸಮಿತಿ ಆರೋಪಿಸಿದೆ.

‘ದ್ವೇಷ ಭಾಷಣ ನಿಯಮಗಳನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜಕಾರಣಿ ಮತ್ತು ಇತರ ಹಿಂದೂ ರಾಷ್ಟ್ರೀಯವಾದಿ ವ್ಯಕ್ತಿಗಳು ಮತ್ತು ಗುಂಪುಗಳಿಗೆ ಅನ್ವಯಿಸುವುದನ್ನು ಫೇಸ್‌ಬುಕ್‌ ಭಾರತದ ಹಿರಿಯ ಅಧಿಕಾರಿಯೊಬ್ಬರು ವಿರೋಧಿಸಿದ್ದರು. ಬಿಜೆಪಿ ನಾಯಕರ ದ್ವೇಷ ಭಾಷಣಗಳನ್ನು ಫೇಸ್‌ಬುಕ್‌ ನಿರ್ಲಕ್ಷಿಸುತ್ತಿದೆ,’ ಎಂದು ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್‌ ಕಳೆದ ತಿಂಗಳು ವರದಿ ಮಾಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.