ನವದೆಹಲಿ: ಬೀದಿನಾಯಿಗಳಿಗೆ ಆಹಾರ ನೀಡುತ್ತಿದ್ದ ವ್ಯಕ್ತಿಯೊಬ್ಬರನ್ನು ಇಲ್ಲಿನ ಪಹಾರ್ಗಂಜ್ ಎಂಬಲ್ಲಿ ನೆರೆಮನೆಯಾತ ಹತ್ಯೆ ಮಾಡಿದ್ದಾರೆ. ಕೊಲೆಯಾದ ಬ್ರಿಜ್ ಮೋಹನ್ ಶ್ವಾನಪ್ರಿಯ. ನಿತ್ಯವೂ ಬೀದಿನಾಯಿಗಳಿಗೆ ಅವರು ಆಹಾರ ನೀಡುತ್ತಿದ್ದರು.
ಪ್ರಹ್ಲಾದ್ ಎಂಬಾತನ ಮೇಲೆ ನಾಯಿಗಳು ದಾಳಿ ಮಾಡಿದ್ದವು. ಹೀಗಾಗಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಮೋಹನ್ ಮೇಲೆ ಪ್ರಹ್ಲಾದ್ ಜಗಳ ತೆಗೆದಿದ್ದ. ನಿತ್ಯ ಆಹಾರ ನೀಡುವುದರಿಂದ ನಾಯಿಗಳ ಹಾವಳಿ ಹೆಚ್ಚಾಗುತ್ತದೆ ಎಂದು ಮೋಹನ್ಗೆ ಎಚ್ಚರಿಕೆ ನೀಡಿದ್ದ. ಆದರೆ ಇಬ್ಬರ ಜಗಳ ತಾರಕಕ್ಕೇರಿತು. ಮನೆಗೆ ಹೋಗಿ ಚಾಕು ತೆಗೆದುಕೊಂಡು ವಾಪಸಾದ ಪ್ರಹ್ಲಾದ್, ಮೋಹನ್ಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿದ್ದ ಮೋಹನ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿ ಪ್ರಹ್ಲಾದ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.