ನವದೆಹಲಿ: ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಮಶಾನದಲ್ಲಿನ ಅರ್ಚಕ ಹಾಗೂ ಇತರ ಮೂವರು ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಚಾರ್ಜ್ಶೀಟ್ನಲ್ಲಿ ಅರ್ಚಕ ರಾಧೇಶ್ಯಾಮ್ ಹಾಗೂ ಸ್ಮಶಾನದಲ್ಲಿನ ಕಾರ್ಮಿಕರಾದ ಕುಲದೀಪ್ ಸಿಂಗ್, ಸಲೀಂ ಅಹ್ಮದ್, ಲಕ್ಷ್ಮೀನಾರಾಯಣ್ ಎಂಬುವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ), 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ), ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಎಸ್ಸಿ/ಎಸ್ಟಿ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಈ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.