ನವದೆಹಲಿ: ಇದೇ 26ರಂದು, ಗಣರಾಜ್ಯೋತ್ಸವದ ದಿನ ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ಪರೇಡ್ಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ರೈತ ನಾಯಕ ಅಭಿಮನ್ಯು ಕೋಹರ್ ಹೇಳಿದ್ದಾರೆ.
ಪ್ರತಿಭಟನಾ ನಿರತ ರೈತರ ಸಂಘಟನೆಗಳು ಪೊಲೀಸರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.
ಈ ಮಧ್ಯೆ, ‘ಜ. 26ರಂದು ರೈತರು ‘ಕಿಸಾನ್ ಗಣತಂತ್ರ ಪರೇಡ್’ ನಡೆಸಲಿದ್ದಾರೆ. ಬ್ಯಾರಿಕೇಡ್ಗಳನ್ನು ತೆರೆಯಲಾಗುತ್ತಿದ್ದು ನಾವು ದೆಹಲಿ ಪ್ರವೇಶಿಸಲಿದ್ದೇವೆ. ನಾವು (ರೈತರು ಮತ್ತು ದೆಹಲಿ ಪೊಲೀಸರು) ಒಪ್ಪಂದಕ್ಕೆ ಬಂದಿದ್ದು, ಪರೇಡ್ ಮಾರ್ಗದ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಅಂತಿಮ ರೂಪುರೇಷೆ ನಾಳೆಯೊಳಗೆ ಸಿದ್ಧವಾಗಲಿದೆ’ ಎಂದು ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.