ADVERTISEMENT

ಗಣರಾಜ್ಯೋತ್ಸವ ಹಿಂಸಾಚಾರ: 200 ಮಂದಿ ಭಾವಚಿತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 21:53 IST
Last Updated 19 ಫೆಬ್ರುವರಿ 2021, 21:53 IST
   

ನವದೆಹಲಿ: ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 200 ಮಂದಿಯ ಭಾವಚಿತ್ರಗಳನ್ನು ದೆಹಲಿ ಪೊಲೀಸರು ಶುಕ್ರವಾರ ಬಿಡುಗಡೆ ಮಾಡಿದ್ದಾರೆ.

ದೆಹಲಿಯಲ್ಲಿ ಜನವರಿ 26ರಂದು ನಡೆದ ಟ್ರ್ಯಾಕ್ಟರ್‌ ರ‍್ಯಾಲಿಗೆ ಸಂಬಂಧಿಸಿದಂತೆ ಎಲ್ಲ ವಿಡಿಯೊಗಳು ಮತ್ತು ಚಿತ್ರಗಳನ್ನು ಪರಿಶೀಲಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಭಾವಚಿತ್ರದಲ್ಲಿ ಇರುವವರನ್ನು ಗುರುತಿಸುವ ಕಾರ್ಯ ನಡೆದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸಿದ ಟ್ರ್ಯಾಕ್ಟರ್‌ ಪರೇಡ್‌ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ನಡೆದಿತ್ತು. ಹಲವರು ಕೆಂಪುಕೋಟೆ ಪ್ರವೇಶಿಸಿ ಧಾರ್ಮಿಕ ಧ್ವಜ ಹಾರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.