ನವದೆಹಲಿ: ಗಣರಾಜ್ಯೋತ್ಸವದ ದಿನದಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 20ಕ್ಕೂ ಹೆಚ್ಚು ಜನರ ಫೋಟೊಗಳನ್ನುಶನಿವಾರ ಬಿಡುಗಡೆ ಮಾಡಿದ್ದಾರೆ.
ಹಿಂಸಾಚಾರದ ವಿಡಿಯೊಗಳನ್ನು ಸ್ಕ್ಯಾನ್ ಮಾಡಿ ಅದರಿಂದ ತೆಗೆದು ಫೋಟೊಗಳನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು ಪತ್ತೆ ಹಚ್ಚುವ ಕಾರ್ಯ ಆರಂಭಿಸಿದ್ದೇವೆ’ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮುಂಚೆ ಹಿಂಸಾಚಾರದಲ್ಲಿ ಭಾಗವಹಿಸಿದ್ದ 200ಕ್ಕೂ ಹೆಚ್ಚು ಜನರ ಫೋಟೊಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.