ADVERTISEMENT

ದೆಹಲಿ ಗಲಭೆ: ಮೂವರು ವಿದ್ಯಾರ್ಥಿಗಳ ಬಿಡುಗಡೆಗೆ ಕೋರ್ಟ್‌ ಸೂಚನೆ

ಪಿಟಿಐ
Published 17 ಜೂನ್ 2021, 12:07 IST
Last Updated 17 ಜೂನ್ 2021, 12:07 IST
ಕೋರ್ಟ್‌– ಪ‍್ರಾತಿನಿಧಿಕ ಚಿತ್ರ
ಕೋರ್ಟ್‌– ಪ‍್ರಾತಿನಿಧಿಕ ಚಿತ್ರ   

ನವದೆಹಲಿ: ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಗಳಾದ ನತಾಶಾ ನರ್ವಾಲ್‌, ದೇವಾಂಗನಾ ಕಾಲಿತಾ ಹಾಗೂ ಆಸಿಫ್‌ ಇಕ್ಬಾಲ್‌ ತನ್ಹಾ ಅವರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕೆಂದು ದೆಹಲಿ ನ್ಯಾಯಾಲಯವು ಗುರುವಾರ ಸೂಚಿಸಿದೆ.

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಈ ಮೂವರನ್ನು ಬಂಧಿಸಲಾಗಿತ್ತು. ಎರಡು ದಿನಗಳ ಹಿಂದೆ ಇವರಿಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿತ್ತು. ಆದರೆ, ಮೂವರು ವಿದ್ಯಾರ್ಥಿಗಳ ಜಾಮೀನು ಮತ್ತು ಮುಚ್ಚಳಿಕೆಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳದ ಕಾರಣ ಅವರನ್ನು ಬಿಡುಗಡೆ ಮಾಡಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT