ನವದೆಹಲಿ: ದೆಹಲಿಯ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯು (ಡಿಎಸ್ಜಿಎಂಸಿ) ಕೋವಿಡ್ ರೋಗಿಗಳಿಗಾಗಿ ಉಚಿತ ಆಂಬುಲೆನ್ಸ್ ಸೇವೆಯನ್ನು ಆರಂಭಿಸಿದೆ.
ಅತ್ಯಾಧುನಿಕ ವೈದ್ಯಕೀಯ ಸೌಕರ್ಯಗಳನ್ನೊಳಗೊಂಡ12 ಆಂಬುಲೆನ್ಸ್ಗಳನ್ನುಮೊದಲ ಹಂತದಲ್ಲಿ ಸೇವೆಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನಷ್ಟು ಆಂಬುಲೆನ್ಸ್ಗಳನ್ನು ನೀಡಲಾಗುವುದು. ಸದ್ಯ ಉಚಿತ ಆಂಬುಲೆನ್ಸ್ ಸೇವೆಯು ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಮತ್ತು ಕೇಂದ್ರ ದೆಹಲಿಯಲ್ಲಿ ಲಭ್ಯವಿದೆ ಎಂದುಡಿಎಸ್ಜಿಎಂಸಿ ಅಧ್ಯಕ್ಷ ಮಜಿಂದರ್ ಸಿಂಗ್ ಸಿರ್ಸಾ ಅವರು ತಿಳಿಸಿದರು.
ಇದಕ್ಕೂ ಮುನ್ನಡಿಎಸ್ಜಿಎಂಸಿಯು, ಕೋವಿಡ್ ಕಾರ್ಯದಲ್ಲಿ ನಿರತರಾಗಿರುವ ದೆಹಲಿಯ ವಿವಿಧ ಆಸ್ಪತ್ರೆಗಳಲ್ಲಿ 200ಕ್ಕೂ ಹೆಚ್ಚು ವೈದ್ಯರಿಗೆ ಉಚಿತ ವಸತಿ ಸೌಲಭ್ಯವನ್ನು ಒದಗಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.