ADVERTISEMENT

ದೆಹಲಿ ಗಲಭೆ: ಕಾನ್‌ಸ್ಟೆಬಲ್‌ಗೆ ಪಿಸ್ತೂಲ್‌ ಹಿಡಿದ ಆರೋಪಿಗೆ ಜಾಮೀನು ನಿರಾಕರಣೆ

ಪಿಟಿಐ
Published 24 ಜೂನ್ 2020, 11:05 IST
Last Updated 24 ಜೂನ್ 2020, 11:05 IST
ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್    

ನವದೆಹಲಿ: ಈಶಾನ್ಯ ದೆಹಲಿ ಭಾಗದಲ್ಲಿಕಳೆದ ಫೆಬ್ರುವರಿಯಲ್ಲಿ ಸಂಭವಿಸಿದ್ದ ಕೋಮು ಗಲಭೆ ವೇಳೆ ಪೊಲೀಸ್‌ ಕಾನ್‌ಸ್ಟೆಬಲ್‌ ಹಣೆಗೆ ಪಿಸ್ತೂಲ್‌ ಹಿಡಿದು ಬೆದರಿಕೆಯೊಡ್ಡಿದ್ದ ಆರೋಪಿಗೆ ದೆಹಲಿ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್‌ ಕುಮಾರ್‌ ಕೈತ್‌ ಅವರು, ‘ಆರೋಪಿ ಶಾರುಖ್‌ ಪಠಾಣ್‌, ಹೀರೊ ಆಗಬೇಕು ಎಂಬ ಉದ್ದೇಶದಿಂದ ಕಾನೂನು ಕೈಗೆತ್ತಿಕೊಂಡಿದ್ದಾನೆ. ಈಗ ಕಾನೂನು ಕ್ರಮ ಎದುರಿಸಲಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT