ADVERTISEMENT

ಟಿಕೆಟ್ ನಿರಾಕರಣೆ ಹಿನ್ನೆಲೆ ಎಎಪಿಗೆ ರಾಜೀನಾಮೆ ಸಲ್ಲಿಸಿದ ಶಾಸಕ ಸುರೇಂದರ್ ಸಿಂಗ್

ಏಜೆನ್ಸೀಸ್
Published 21 ಜನವರಿ 2020, 9:25 IST
Last Updated 21 ಜನವರಿ 2020, 9:25 IST
ಆಮ್ ಆದ್ಮಿ ಶಾಸಕ ಸುರೇಂದರ್ ಸಿಂಗ್
ಆಮ್ ಆದ್ಮಿ ಶಾಸಕ ಸುರೇಂದರ್ ಸಿಂಗ್   

ನವದೆಹಲಿ: ಮುಂದಿನ ತಿಂಗಳು ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪಕ್ಷದಿಂದ ಟಿಕೆಟ್ ದೊರೆಯಲಿಲ್ಲ ಎಂದು ಬೇಸತ್ತು ಆಮ್ ಆದ್ಮಿ ಪಕ್ಷದ ಶಾಸಕ ಸುರೇಂದರ್ ಸಿಂಗ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, ನಾನು ದುಃಖಿತನಾಗಿದ್ದೇನೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ ಈ ಮೂಲಕ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಫೆಬ್ರವರಿ 8ರಂದು ದೆಹಲಿಯಲ್ಲಿ ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.