ADVERTISEMENT

ಹರ್ಯಾಣದಲ್ಲಿ ದಟ್ಟ ಮಂಜು: ರಸ್ತೆ ಅಪಘಾತದಲ್ಲಿ 7 ಸಾವು

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2018, 5:51 IST
Last Updated 29 ಡಿಸೆಂಬರ್ 2018, 5:51 IST
ಮಂಜು ಮುಸುಕಿದ ರಸ್ತೆ (ಪ್ರಾತಿನಿಧಿಕ ಚಿತ್ರ)
ಮಂಜು ಮುಸುಕಿದ ರಸ್ತೆ (ಪ್ರಾತಿನಿಧಿಕ ಚಿತ್ರ)   

ಅಂಬಾಲ: ದಟ್ಟ ಮಂಜು ಕಾರಣ ಅಂಬಾಲ - ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಎರಡು ಎಸ್‍ಯುವಿ ಕಾರುಗಳು ಡಿಕ್ಕಿ ಹೊಡೆದು 7 ಮಂದಿ ಸಾವಿಗೀಡಾಗಿದ್ದಾರೆ.

ಚಂಡೀಗಢದಿಂದ ಬರುತ್ತಿದ್ದ ಎರಡು ಕಾರುಗಳು ಡಿಕ್ಕಿ ಹೊಡೆದಿದ್ದು, ಮಂಜು ಆವರಿಸಿದಕಾರಣ ರಸ್ತೆ ಅಸ್ಪಷ್ಟವಾಗಿ ಕಾಣುತ್ತಿತ್ತು. ಅಪಘಾತದಲ್ಲಿ ನಾಲ್ಕು ಮಂದಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಹರ್ಯಾಣದ ಝಜ್ಜಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಎಂಟು ಮಂದಿ ಸಾವಿಗೀಡಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.