ADVERTISEMENT

ದೆಹಲಿಯಲ್ಲಿ ದಟ್ಟ ಮಂಜು: ರೈಲು ಸಂಚಾರ ಸ್ಥಗಿತ, ವಿಮಾನಯಾನ ವಿಳಂಬ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜನವರಿ 2024, 2:58 IST
Last Updated 16 ಜನವರಿ 2024, 2:58 IST
<div class="paragraphs"><p>ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಜು ಆವರಿಸಿರುವ ದೃಶ್ಯ</p></div>

ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಜು ಆವರಿಸಿರುವ ದೃಶ್ಯ

   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಭಾರಿ ಮಂಜು ಕವಿದ ವಾತಾವರಣದಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ (ಐಜಿಐ) ನಿಲ್ದಾಣದಲ್ಲಿ ರನ್‌ವೇ ಕಾಣಿಸದಷ್ಟು ದಟ್ಟವಾಗಿ ಮಂಜು ಆವರಿಸಿದ್ದರಿಂದ ದೆಹಲಿಯಿಂದ ಹೊರಡಬೇಕಿದ್ದ ಸುಮಾರು 30 ವಿಮಾನಗಳು ವಿಳಂಬವಾಗಿದ್ದು, 17 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ದೆಹಲಿಯಲ್ಲಿ ಕನಿಷ್ಠ ತಾಪಮಾನ 5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹಲವು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವ ದೃಶ್ಯ ಕಂಡುಬಂತು.

ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ದಟ್ಟ ಮಂಜಿನಿಂದಾಗಿ ಹಲವೆಡೆ 'ಶೂನ್ಯ ಗೋಚರತೆ' ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಮತ್ತು ಅನಗತ್ಯ ಪ್ರಯಾಣ ಮಾಡದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

‘ನಾನು ಪ್ರಯಾಣಿಸಬೇಕಿದ್ದ ವಿಮಾನವು ಬೆಳಿಗ್ಗೆ 8:40ಕ್ಕೆ ಹೊರಡಬೇಕಿತ್ತು. ಆದರೆ, ಅದು 10:30ಕ್ಕೆ ಹೊರಡಲಿದೆ. ದಟ್ಟ ಮಂಜು ಮತ್ತು ಹವಾಮಾನ ವೈಪರೀತ್ಯದಿಂದಾಗಿ ವಿಳಂಬವಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಪ್ರಯಾಣಿಕರೊಬ್ಬರು ಹೇಳಿದ್ದಾರೆ.

ದಟ್ಟ ಮಂಜಿನಿಂದಾಗಿ ದೆಹಲಿಗೆ ಬರಬೇಕಿದ್ದ ಮತ್ತು ಹೊರಡಬೇಕಿದ್ದ 30ಕ್ಕೂ ಹೆಚ್ಚು ರೈಲುಗಳು ವಿಳಂಬಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.