ADVERTISEMENT

ಚುನಾವಣಾ ಹೊಣೆ: ಶಿಕ್ಷಕರ ಹೊರೆ ತಗ್ಗಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2019, 19:50 IST
Last Updated 2 ಅಕ್ಟೋಬರ್ 2019, 19:50 IST
   

ನವದೆಹಲಿ: ಚುನಾವಣೆಯ ಮುಖ್ಯ ಕೆಲಸಗಳಿಗೆ ಮಾತ್ರ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚನೆ ನೀಡಿದೆ. ಮತದಾರರ ಪಟ್ಟಿ ಪರಿಷ್ಕರಣೆ, ಮತದಾರರ ಮಾಹಿತಿ ಸಂಗ್ರಹದಂತಹ ಕೆಲಸಗಳಿಗೆ ಶಿಕ್ಷಕರನ್ನು ಬಳಸಬಾರದು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವಾಲಯ ತಿಳಿಸಿದೆ.

ಚುನಾವಣಾ ಸಂಬಂಧಿ ಕೆಲಸಗಳಿಗೆ ಶಿಕ್ಷಕರನ್ನು ನಿಯೋಜಿಸುವುದರಿಂದ ಅವರ ಆದ್ಯತೆಯ ಕೆಲಸವಾದ ಬೋಧನೆಗೆ ಹಿನ್ನಡೆಯಾಗುತ್ತಿದೆ ಎಂಬುದನ್ನು ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಇತರೆ ಇಲಾಖೆಗಳ ಸಿಬ್ಬಂದಿಯನ್ನೂ ಮತಗಟ್ಟೆ ಅಧಿಕಾರಿಗಳಾಗಿ ನಿಯೋಜಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT