ADVERTISEMENT

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರ, ಒಡಿಶಾದತ್ತ ಚಂಡಮಾರುತ– ಎಚ್ಚರಿಕೆ

ಪಿಟಿಐ
Published 25 ಸೆಪ್ಟೆಂಬರ್ 2021, 7:45 IST
Last Updated 25 ಸೆಪ್ಟೆಂಬರ್ 2021, 7:45 IST
ಪ್ರಾತಿನಿಧಿಕ ಚಿತ್ರ 
ಪ್ರಾತಿನಿಧಿಕ ಚಿತ್ರ    

ಭುವನೇಶ್ವರ: ಬಂಗಾಳ ಕೊಲ್ಲಿಯ ಈಶಾನ್ಯ ಮತ್ತು ಪೂರ್ವ ಮಧ್ಯಭಾಗದಲ್ಲಿ ‌ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ.

ಗೋಪಾಲಪುರದ ಪೂರ್ವ– ಆಗ್ನೇಯ ದಿಕ್ಕಿನಲ್ಲಿ 510 ಕಿ.ಮೀ ಮತ್ಧು ಆಂಧ್ರಪ್ರದೇಶದ ಕಳಿಂಗಪಟ್ಟಣದಿಂದ 590 ಕಿ.ಮೀ ದೂರದಲ್ಲಿ ಶನಿವಾರ ಮುಂಜಾನೆ ವಾಯುಭಾರ ತೀವ್ರವಾಗಿ ಕುಸಿತಗೊಂಡಿದೆ.

‘ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ. ಈ ಮಾರುತಗಳು ಪಶ್ಚಿಮ ದಿಕ್ಕಿಗೆ ಚಲಿಸಿ, ಆಂಧ್ರಪ್ರದೇಶ ದ ಉತ್ತರ ಭಾಗ ಮತ್ತು ಒಡಿಶಾದ ದಕ್ಷಿಣ ಭಾಗದ ಕರಾವಳಿಯನ್ನು ದಾಟಬಹುದು. ಭಾನುವಾರ (ಸೆ.26) ವಿಶಾಖಪಟ್ಟಣಂ ಮತ್ತು ಗೋಪಾಲಪುರ ನಡುವೆ ಕಳಿಂಗಪಟ್ಟಣಂ ಸುತ್ತ ಚಂಡಮಾರುತ ಉಂಟಾಗುವ ಸಾಧ್ಯತೆ ಇದೆ‌‘ ಎಂದು ಇಲಾಖೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.