ಸೋಮನಾಥ್: ವಿನಾಶಕಾರಿ ಮತ್ತು ಭಯೋತ್ಪಾದನೆ ಪಡೆಗಳು ಕೆಲ ಕಾಲ ಮಾತ್ರ ಪ್ರಾಬಲ್ಯ ಸಾಧಿಸಬಹುದು. ಆದರೆ, ಈ ಪಡೆಗಳು ಶಾಶ್ವತವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುಜರಾತ್ನ ಪ್ರಸಿದ್ಧ ಸೋಮನಾಥ್ ಮಂದಿರದ ವಿವಿಧ ಯೋಜನೆಗಳಿಗೆ ವರ್ಚುವಲ್ ವ್ಯವಸ್ಥೆ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ‘ಸೋಮನಾಥ್ ದೇವಾಲಯವನ್ನು ಹಲವು ಬಾರಿ ನಾಶಗೊಳಿಸಲಾಗಿತ್ತು. ಇಲ್ಲಿನ ವಿಗ್ರಹಗಳನ್ನು ವಿರೂಪಗೊಳಿಸಲಾಗಿತ್ತು. ಆದರೆ, ದೇವಾಲಯ ಮತ್ತೆ ತನ್ನ ವೈಭವವನ್ನು ಪಡೆದುಕೊಂಡಿದೆ. ಇದು ನಮ್ಮಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ’ ಎಂದು ಹೇಳಿದ್ದಾರೆ.
ಅಫ್ಗಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಅವರು ಈ ಹೇಳಿಕೆ ನೀಡಿದ್ದಾರೆ.
ಪ್ರವಾಸೋದ್ಯಮದ ಬಗ್ಗೆ ಪ್ರಸ್ತಾಪಿಸಿದ ಅವರು, ‘ಪ್ರವಾಸೋದ್ಯಮದ ಸ್ಪರ್ಧಾತ್ಮಕ ಸೂಚ್ಯಂಕದಲ್ಲಿ ಭಾರತ 2013ರಲ್ಲಿ 65ನೇ ಸ್ಥಾನದಲ್ಲಿತ್ತು. ಆದರೆ, 2019ರಲ್ಲಿ 34ನೇ ಸ್ಥಾನ ಪಡೆಯಿತು ಎಂದು ವಿವರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.