ADVERTISEMENT

ಕಂಗನಾ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುಡುಗಿದ ದೇವೇಂದ್ರ ಫಡಣವೀಸ್‌

ಏಜೆನ್ಸೀಸ್
Published 7 ಸೆಪ್ಟೆಂಬರ್ 2020, 14:38 IST
Last Updated 7 ಸೆಪ್ಟೆಂಬರ್ 2020, 14:38 IST
ದೇವೇಂದ್ರ ಫಡಣವೀಸ್‌
ದೇವೇಂದ್ರ ಫಡಣವೀಸ್‌   

ಮುಂಬೈ: ಬಾಲಿವುಡ್‌ ನಟಿ ಕಂಗನಾ ರನೋಟ್‌ ವಿಚಾರವಾಗಿ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡಣವೀಸ್‌ ಶಿವಸೇನಾನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಮುಂಬೈನಲ್ಲಿ ಸೋಮವಾರ ಮಾತನಾಡಿರುವ ಅವರು, 'ಯಾರಾದರೂ ತಪ್ಪು ಮಾತನಾಡಿದರೆ, ಅವರ ಆಲೋಚನೆ ತಪ್ಪಾಗಿದ್ದರೆ, ಅದನ್ನು ನಾವು ಆಕ್ಷೇಪಿಸಬಹುದು. ಆದರೆ, ಅವರ ಜೀವ ಹಾಗೂ ಆಸ್ತಿಯನ್ನು ರಕ್ಷಿಸುವುದು ರಾಜ್ಯ ಸರ್ಕಾರ ಮತ್ತು ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿದವರ ಜವಾಬ್ದಾರಿಯಾಗಿದೆ' ಎಂದು ಹೇಳಿದ್ದಾರೆ.

'ನೀವು ಬೇರೆಯವರ ಅಭಿಪ್ರಾಯವನ್ನು ಇಷ್ಟಪಡದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ. ಆದರೆ, ಅವರನ್ನು ರಕ್ಷಿಸುವುದು ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದವರ ಜವಾಬ್ದಾರಿಯಾಗಿದೆ. ಕೇಂದ್ರವು ಆ ಜವಾಬ್ದಾರಿಯನ್ನು ನಿಭಾಯಿಸಿದೆ ಎಂಬುದಾಗಿ ನಾನು ಭಾವಿಸುತ್ತೇನೆ' ಎಂದು ದೇವೇಂದ್ರ ಫಡಣವೀಸ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.