ನವದೆಹಲಿ: ‘ಜೈಲಿನಲ್ಲಿ ಸುರಕ್ಷಿತವಾಗಿ ಇರುವಂತೆ ನೋಡಿಕೊಳ್ಳಲು ನನ್ನಿಂದ ₹10 ಕೋಟಿ ಸುಲಿಗೆ ಮಾಡಲಾಗಿದೆ’ ಎಂದು ವಂಚಕ ಸುಕೇಶ್ ಚಂದ್ರಶೇಖರ್ ಆರೋಪಿಸಿದ ಬೆನ್ನಲ್ಲೇ ತಿಹಾರ್ ಜೈಲಿನ ಡಿಜಿಪಿ ಸಂದೀಪ್ ಗೋಯಲ್ ಅವರನ್ನು ವರ್ಗಾಯಿಸಲಾಗಿದೆ.
ಆ ಜಾಗಕ್ಕೆ ಐಪಿಎಸ್ ಅಧಿಕಾರಿ ಸಂಜಯ್ ಬೇನಿವಾಲ್ ಅವರನ್ನು ವರ್ಗಾಯಿಸಿ ಆದೇಶಿಸಲಾಗಿದೆ.
‘ಸಚಿವ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸತ್ಯೇಂದರ್ ಜೈನ್ ಅವರು ನನ್ನಿಂದ ₹10 ಕೋಟಿ ಸುಲಿಗೆ ಮಾಡಿದ್ದಾರೆ. ಜೈಲಿನ ಡಿಜಿಪಿ ಸಂದೀಪ್ ಗೋಯಲ್ ಅವರಿಗೆ ₹1.5 ಕೋಟಿ ನೀಡುವಂತೆ ಅವರು ಹೇಳಿದ್ದರು’ ಎಂದು ಚಂದ್ರಶೇಖರ್ ಆರೋಪಿಸಿಸಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಗೆ ಪತ್ರ ಬರೆದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.