ADVERTISEMENT

ಧನಕರ್ ರಾಜೀನಾಮೆ: ರಾಜ್ಯಸಭೆ ಕಲಾಪ ನಿರ್ವಹಿಸಿದ ಉಪಸಭಾಪತಿ ಹರಿವಂಶ್

ಪಿಟಿಐ
Published 22 ಜುಲೈ 2025, 6:38 IST
Last Updated 22 ಜುಲೈ 2025, 6:38 IST
<div class="paragraphs"><p>ಹರಿವಂಶ್</p></div>

ಹರಿವಂಶ್

   

ನವದೆಹಲಿ: ಆರೋಗ್ಯ ಸಮಸ್ಯೆಯ ಕಾರಣ ನೀಡಿ ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿದ್ದರಿಂದ, ರಾಜ್ಯಸಭೆ ಉಪಸಭಾಪತಿ ಹರಿವಂಶ್ ನಾರಾಯಣ ಸಿಂಗ್ ಅವರು ಮಂಗಳವಾರ ರಾಜ್ಯಸಭೆಯ ಕಲಾಪವನ್ನು ನಿರ್ವಹಿಸಿದರು.

ಭಾರತದ ಸಂವಿಧಾನದ ಪ್ರಕಾರ ಉಪರಾಷ್ಟ್ರಪತಿಗಳೇ ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರು.

ADVERTISEMENT

ಸಾಮಾನ್ಯವಾಗಿ ದಿನದ ಆರಂಭದಲ್ಲಿ ಧನಕರ್ ಅವರೇ ಕಲಾಪಗಳಿಗೆ ನೇತೃತ್ವ ವಹಿಸುತ್ತಿದ್ದರು.

ಧನಕರ್ ಅವರು ಸೋಮವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದರು.

‘ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ‘ ಎಂದು ಅವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

74 ವರ್ಷದ ಧನಕರ್, ಆಗಸ್ಟ್ 2022 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.