ನವದೆಹಲಿ: ಸುಪ್ರೀಂ ಕೋರ್ಟ್ನಲ್ಲಿ ವೈದ್ಯರ ರಕ್ಷಣೆ ಕೋರಿ ಪಶ್ಚಿಮ ಬಂಗಾಳ ವೈದ್ಯರು ಸಲ್ಲಿಸಿದ್ದ ತುರ್ತು ವಿಚಾರಣೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ವೈದ್ಯರ ರಕ್ಷಣೆಯೂ ನಮಗೆ ಮುಖ್ಯವಾಗಿದೆ, ಈಗಾಗಲೇ ಪಶ್ಚಿಮ ಬಂಗಾಳ ಮತ್ತು ಇತರೆ ರಾಜ್ಯಗಳಲ್ಲಿನ ವೈದ್ಯರು ಮುಷ್ಕರವನ್ನು ವಾಪಾಸು ಪಡೆದಿದ್ದಾರೆ ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಇದರತುರ್ತು ವಿಚಾರಣೆ ಅಗತ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ರಜಾ ಪೀಠದ ನ್ಯಾಯಧೀಶರಾದ ದೀಪಕ್ ಗುಪ್ತ ಹಾಗೂ ಸೂರ್ಯ ಕಾಂತ್ ಅವರು ಈ ಅರ್ಜಿ ವಿಚಾರಣೆಯನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.