ತಿರುಪತಿ: ತಿರುಮಲದ ವೆಂಕಟೇಶ್ವರ ದೇಗುಲಕ್ಕೆ ಹೈದರಾಬಾದ್ ಮೂಲದ ಭಕ್ತ ಬಿ. ಸುಧಾಕರ್ ರೆಡ್ಡಿ ಎಂಬುವರು ₹ 1.11 ಕೋಟಿ ದೇಣಿಗೆ ನೀಡಿದ್ದಾರೆ.
ಈ ಹಣವನ್ನು ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಕೈಗೊಳ್ಳುವ ಆರೋಗ್ಯ ಸೇವಾ ಯೋಜನೆಗಳಿಗೆ ಬಳಸಿಕೊಳ್ಳಲು ಅವರು ಮನವಿ ಮಾಡಿದ್ದಾರೆ ಎಂದು ದೇವಸ್ಥಾನದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ದೇವಸ್ಥಾನಕ್ಕೆ ಕುಟುಂಬದವರ ಜತೆ ಭೇಟಿ ಮಾಡಿದ್ದ ಸುಧಾಕರ್ ಅವರು ಪೂಜೆ ಸಲ್ಲಿಸಿದ ಬಳಿಕ ಡಿ.ಡಿಯನ್ನು ಟಿಟಿಡಿಯ ಕಾರ್ಯ ನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಅವರಿಗೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.