ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ತಮ್ಮ ಸಾಮಾಜಿಕ ಜಾಲತಾಣಗಳ ವಿಷಯದಲ್ಲಿ ವಿದೂಷಕನಂತೆ ವರ್ತಿಸುತ್ತಾ ದೇಶದ ಸಮಯ ವ್ಯರ್ಥ ಮಾಡುವುದನ್ನು ಬಿಡಬೇಕು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
‘ಪ್ರೀತಿಯ @PMOIndia ದೇಶದಲ್ಲಿ ಹೊಸದಾಗಿ ಕೋವಿಡ್–19 ಸೋಂಕು ಪತ್ತೆಯಾಗಿರುವುದರಿಂದ ತುರ್ತು ಪರಿಸ್ಥಿತಿ ಎದುರಾಗಿದೆ. ಇದನ್ನು ನಿರ್ವಹಿಸುವ ಕುರಿತು ಗಮನವಹಿಸಿ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಪರಿಸ್ಥಿತಿ ಎದುರಿಸುವುದು ಹೇಗೆ ಎನ್ನುವ ಕುರಿತೂ ಟ್ವೀಟ್ ಮಾಡಿರುವ ರಾಹುಲ್, ಸಿಂಗಪುರದಲ್ಲಿ ಜನರು ಕೋವಿಡ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಹೇಗೆ ಎನ್ನುವಂತೆ ಅಲ್ಲಿನ ಪ್ರಧಾನಿ ಮಾತನಾಡಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.