ನವದೆಹಲಿ: ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ಹೈಕೋರ್ಟ್ ಮೊರೆ ಹೋಗುವಂತೆ ನ್ಯಾಯಮೂರ್ತಿಗಳಾದ ಆರ್.ಎಫ್. ನರಿಮನ್ ಮತ್ತು ನವೀನ್ ಸಿನ್ಹಾ ಅವರ ಪೀಠ ಸೂಚಿಸಿದೆ.
ಬಂಧಿಸದಂತೆ ಜಾಮೀನು ಹಾಗೂ ಪ್ರಕರಣ ವಜಾಗೊಳಿಸುವಂತೆ ಕೋರಿ ಆಳ್ವ ಪರವಾಗಿ ಅವರ ವಕೀಲ ನಿಶಾಂತ್ ಪಾಟೀಲ್ ಅರ್ಜಿ ಸಲ್ಲಿಸಿದ್ದರು.
ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಅವರು ಡ್ರಗ್ಸ್ ಪ್ರಕರಣದಲ್ಲಿ ಹೆಸರು ಕೇಳಿಬಂದ ಬಳಿಕ ತಲೆಮರೆಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.